ಕಲ್ಲು ಹಳ್ಳ ಗ್ರಾಮದಲ್ಲಿ ಪೊಲೀಸ್ ದಾಳಿ: ಅಕ್ರಮ ಮದ್ಯ ಮಾರಾಟ ಆರೋಪಿಗೆ ಬಂಧನ

ರಿಪ್ಪನ್ ಪೇಟೆ: ಶಿವಮೊಗ್ಗ ಜಿಲ್ಲೆಯ ರಿಪ್ಪನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲು ಹಳ್ಳ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿರುವ ಘಟನೆ ಫೆಬ್ರವರಿ 17, 2026 ರಂದು ನಡೆದಿದೆ.

ಎಫ್‌ಐಆರ್ ವಿವರಗಳ ಪ್ರಕಾರ, ಫೆಬ್ರವರಿ 17ರಂದು ಸಂಜೆ 6.00 ಗಂಟೆ ವೇಳೆಗೆ ಖಚಿತ ಮಾಹಿತಿ ಪಡೆದ ಪೊಲೀಸರು ಕಲ್ಲು ಹಳ್ಳ ಗ್ರಾಮದ ಅಂಗಡಿ ಮುಂಗಟ್ಟು ಪ್ರದೇಶದ ಬಳಿ ದಾಳಿ ನಡೆದಿದೆ. ಈ ವೇಳೆ ಯಾವುದೇ ಮಾನ್ಯ ಪರವಾನಗಿ ಇಲ್ಲದೆ ಸಾರ್ವಜನಿಕರಿಗೆ ಮದ್ಯ ಮಾರಾಟ ಮಾಡುವ ಆರೋಪಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.ಆರೋಪಿಯ ಬಳಿ ಸುಮಾರು 90 ಎಂಎಲ್ ಸಾಮರ್ಥ್ಯದ “ಒರಿಜಿನಲ್ ಚಾಯ್ಸ್ ಡಿಲಕ್ಸ್ ವಿಸ್ಕಿ” ಸೇರಿದಂತೆ ಮದ್ಯದ ಪ್ಯಾಕೆಟ್‌ಗಳು ಮತ್ತು ಬಾಟಲಿಗಳನ್ನು ಜಪ್ತಿ ಮಾಡಲಾಗಿದೆ. ಜಪ್ತಿ ಮಾಡಿದ ಮದ್ಯದ ಒಟ್ಟು ಮೌಲ್ಯ ಸುಮಾರು 600 ರೂಪಾಯಿಗಳಷ್ಟಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಈ ಸಂಬಂಧ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಅಬಕಾರಿ ಕಾಯ್ದೆಯ ಕಲಂ 15(ಎ), 3 ಸೇರಿದಂತೆ ಸಂಬಂಧಿತ ವಿಧಿಗಳಡಿ ಪ್ರಕರಣ ದಾಖಲಾಗಿದ್ದು, ಪ್ರಕರಣವು ತೀರ್ಥಹಳ್ಳಿ ಉಪವಿಭಾಗದ ವ್ಯಾಪ್ತಿಗೆ ಒಳಪಟ್ಟಿದೆ.

ಈ ಸಂಧರ್ಭದಲ್ಲಿ ಸಿಬ್ಬಂದಿಗಳಾದ ಉಮೇಶ್, ರಾಮಚಂದ್ರ, ವಿಶ್ವನಾಥ್ ಹಾಗೂ ಅವಿನಾಶ್ ಉಪಸ್ಥಿತರಿದ್ದರು.

ಬಂಧಿತನ ವಿರುದ್ಧ ಮುಂದಿನ ತನಿಖೆ ಮುಂದುವರಿದಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ತಡೆಗಟ್ಟಲು ಪೊಲೀಸರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.

ವಾರದಿ :ಕೆರೆಹಳ್ಳಿ ಅಂಜನ್

  • malnadsuddi36@gmail.com

    ಮಲ್ನಾಡ್ ಸುದ್ದಿ ಇದು ಕೇವಲ ಸುದ್ದಿ ವಾಹಿನಿಯಲ್ಲ ಮಲ್ನಾಡ್ ಸುದ್ದಿ ಇದು ಮಲೆನಾಡ ಜನರ ಧ್ವನಿ ಜನರೊಂದಿಗೆ ಸೇರಿ ಅನ್ಯಾಯದ ವಿರುದ್ಧ ಹೋರಾಡುವುದು ನಮ್ಮ ಮಲ್ನಾಡ್ ಸುದ್ದಿ ತಂಡ ನೈಜ್ಯ ಅಪರಾಧ. ಪ್ರಸ್ತುತ ರಾಜಕೀಯ. ಕ್ರೀಡೆ. ಸಾಂಸ್ಕೃತಿಕ ಕಾರ್ಯಕ್ರಮ. ಅನ್ಯಾಯದ ವಿರುದ್ಧ ಹೋರಾಟ. ಉಚಿತ ಕಾನೂನು ಸಲಹೆ. ಸಿನಿಮಾ ಸ್ಟೋರಿಗಳು. ಸರ್ಕಾರದ ಅನುದಾನಗಳ ಬಗ್ಗೆ ಸಮಗ್ರ ಮಾಹಿತಿ. ಒಟ್ಟಾರೆಯಾಗಿ ಸಮಾಜವನ್ನು ಸುಧಾರಿಸುವುದು ನಮ್ಮ ಮಲ್ನಾಡ್ ಸುದ್ದಿ ತಂಡದ ಗುರಿ

    Related Posts

    ಬಾವಿ ಅನುದಾನದ ಹಣ ಇದ್ದರೂ ಗ್ರಾಮಸ್ಥರಿಂದ 60000 ಹಣ ವಸೂಲಿ:

    Despite the government releasing funds for the construction of a well in Kudumallige Gram Panchayat limits of Thirthahalli taluk, money has been collected from the villagers ತೀರ್ಥಹಳ್ಳಿ : ತಾಲೂಕಿನ ಕುಡುಮಲ್ಲಿಗೆ…

    ಶಿವಮೊಗ್ಗ ಹಿಂದುಳಿದ ವರ್ಗಗಳ ಕುರುವಳ್ಳಿ ನಾಗರಾಜ್ ಪ್ರಧಾನ ಕಾರ್ಯದರ್ಶಿ ಆಗಿ ಆಯ್ಕೆ:

    Shivamogga: Kuruvalli Nagaraj has been appointed as the General Secretary of the Shivamogga District Congress Backward Classes (Youth Wing) unit. ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ (ಯುವ ಸಂಘಟನೆ) ಘಟಕದ ಪ್ರಧಾನ…

    Leave a Reply

    Your email address will not be published. Required fields are marked *

    You Missed

    ಬಾವಿ ಅನುದಾನದ ಹಣ ಇದ್ದರೂ ಗ್ರಾಮಸ್ಥರಿಂದ 60000 ಹಣ ವಸೂಲಿ:

    ಶಿವಮೊಗ್ಗ ಹಿಂದುಳಿದ ವರ್ಗಗಳ ಕುರುವಳ್ಳಿ ನಾಗರಾಜ್ ಪ್ರಧಾನ ಕಾರ್ಯದರ್ಶಿ ಆಗಿ ಆಯ್ಕೆ:

    ಚಿನ್ನ ಕಳವು ಆರೋಪಿ ಬಂಧನ 30 ಗ್ರಾಂ ಚಿನ್ನದ ಗಟ್ಟಿ ಪೊಲೀಸರ ವಶಕ್ಕೆ

    ಫೇಸ್ಬುಕ್ ಇನ್ಸ್ಟಾಗ್ರಾಮ್ ಮೂಲಕ ಹನಿ ಟ್ರ್ಯಾಪ್ ಪ್ಯಾಷನ್ ಡಿಸೈನರ್ ಬಂಧನ:

    ಟ್ರಾಕ್ಟರ್ ಪಲ್ಟಿ: ಬಾಲಕ ಸ್ಥಳದಲ್ಲೇ ಸಾವು

    ಹನಿ ಟ್ರಾಪ್. ಆರೋಪಿ ಗಳ ಬಂಧನ