
ಹೊಸನಗರ: ತಾಲೂಕಿನ ಹಿಲಕುಂಜಿ ಸಮೀಪ ಒಣ ಮೆಣಸು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ ಘಟನೆ ನಡೆದಿದೆ. ಅದೃಷ್ಟವಶಾತ್ ಈ ಅಪಘಾತದಲ್ಲಿ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ.



ಮಾಹಿತಿಯ ಪ್ರಕಾರ, ಒಣ ಮೆಣಸು ತುಂಬಿಕೊಂಡು ತೆರಳುತ್ತಿದ್ದ ಲಾರಿ ಹಿಲಕುಂಜಿ ಬಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಗ್ಗಿನಲ್ಲಿ ಉರುಳಿದೆ. ಅಪಘಾತದ ಪರಿಣಾಮ ಲಾರಿ ಬದಿಗೆ ಮಲಗಿದ ಸ್ಥಿತಿಯಲ್ಲಿ ಕಂಡುಬಂದಿದೆ. ಲಾರಿಯಲ್ಲಿ ಸಾಗಿಸುತ್ತಿದ್ದ ಒಣ ಮೆಣಸಿನ ಚೀಲಗಳು ಚದುರಿಕೊಂಡಿದ್ದು, ವಾಹನಕ್ಕೆ ಭಾಗಶಃ ಹಾನಿಯಾಗಿದೆ.
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಸ್ಥಳಕ್ಕೆ ಧಾವಿಸಿ ನೆರವು ನೀಡಿದ್ದಾರೆ. ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎನ್ನಲಾಗಿದೆ.
ಸ್ಥಳೀಯರು ಆ ಪ್ರದೇಶದಲ್ಲಿ ರಸ್ತೆ ತಿರುವು ಅಪಾಯಕಾರಿ ಆಗಿರುವುದರಿಂದ ವಾಹನ ಚಾಲಕರು ಎಚ್ಚರಿಕೆಯಿಂದ ಸಂಚರಿಸಬೇಕು ಎಂದು ಮನವಿ ಮಾಡಿದ್ದಾರೆ.
ವರದಿ ಗಣೇಶ್ ರಿಪ್ಪನ್ ಪೇಟೆ