ಫೇಸ್ಬುಕ್ ಇನ್ಸ್ಟಾಗ್ರಾಮ್ ಮೂಲಕ ಹನಿ ಟ್ರ್ಯಾಪ್ ಪ್ಯಾಷನ್ ಡಿಸೈನರ್ ಬಂಧನ:

Just this week, police arrested a 33-year-old fashion designer, Deepa Avatagi. She allegedly used social media to befriend wealthy men, lured them to hotels, and then locked them in bathrooms to steal their belongings (including cars and cash) before blackmailing them.

ಬೆಳಗಾವಿ: ಸಾಮಾಜಿಕ ಜಾಲತಾಣಗಳ ಮೂಲಕ ಶ್ರೀಮಂತ ವ್ಯಕ್ತಿಗಳನ್ನು ಟಾರ್ಗೆಟ್ ಮಾಡಿ ಹನಿ ಟ್ರ್ಯಾಪ್ ಮಾಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಮಹಿಳೆಯನ್ನು ಬೆಳಗಾವಿ ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ.ಬಂಧಿತ ಆರೋಪಿಯನ್ನು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಮೂಲದ ದೀಪಾ ಅವಟಗಿ (33) ಎಂದು ಗುರುತಿಸಲಾಗಿದೆ. ಈ ಪ್ರಕರಣದಲ್ಲಿ ಆಕೆಯ ಸ್ನೇಹಿತ ಶಿವಾನಂದ ಮಠಪತಿ ಎಂಬಾತ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಶಿವಾನಂದ ಮಠಪತಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನಿವಾಸಿ ಎಂದು ತಿಳಿದುಬಂದಿದೆ.ಪೊಲೀಸರ ಮಾಹಿತಿ ಪ್ರಕಾರ, ಶಿವಾನಂದ ಶ್ರೀಮಂತ ವ್ಯಕ್ತಿಗಳ ಮಾಹಿತಿ ದೀಪಾಳಿಗೆ ನೀಡುತ್ತಿದ್ದನು. ಬಳಿಕ ದೀಪಾ ಫೇಸ್ಬುಕ್ ಹಾಗೂ ಇನ್‌ಸ್ಟಾಗ್ರಾಂ ಮೂಲಕ ಅವರನ್ನು ಸಂಪರ್ಕಿಸಿ ಪರಿಚಯ ಬೆಳೆಸಿಕೊಂಡು ತನ್ನ ಬಲೆಗೆ ಬೀಳಿಸುತ್ತಿದ್ದಳು. ನಂತರ ಅಶ್ಲೀಲ ಚಾಟ್ ಮತ್ತು ಫೋನ್ ಸಂಭಾಷಣೆಗಳ ಮೂಲಕ ಅವರನ್ನು ಲಾಡ್ಜ್‌ಗೆ ಕರೆಸಿಕೊಳ್ಳುತ್ತಿದ್ದಳು.ಲಾಡ್ಜ್‌ಗೆ ಬಂದ ಬಳಿಕ ವ್ಯಕ್ತಿಗಳಿಗೆ ಸ್ನಾನ ಮಾಡಿ ಬರಲು ಹೇಳಿ, ಅವರು ಬಾತ್‌ರೂಮ್‌ಗೆ ಹೋಗಿದಾಗ ಹೊರಗಿನಿಂದ ಬಾಗಿಲು ಹಾಕಿ ಲಾಕ್ ಮಾಡುತ್ತಿದ್ದಳು. ಬಳಿಕ ಅವರ ಮೊಬೈಲ್ ಫೋನ್, ಹಣ ಹಾಗೂ ಕಾರಿನ ಕೀಲಿಗಳನ್ನು ತೆಗೆದುಕೊಂಡು ಸ್ಥಳದಿಂದ ಪರಾರಿಯಾಗುತ್ತಿದ್ದಳು. ನಂತರ ಬೇರೆ ನಂಬರಗಳಿಂದ ಕರೆ ಮಾಡಿ ಬ್ಲ್ಯಾಕ್‌ಮೇಲ್ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದಳು ಎಂದು ತಿಳಿದುಬಂದಿದೆ.ಹನಿಟ್ರ್ಯಾಪ್‌ಗೆ ಬಿದ್ದ ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಬೆಳಗಾವಿಯ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್ಸ್‌ಪೆಕ್ಟರ್ ಪರಶುರಾಮ ಪೂಜೇರಿ ನೇತೃತ್ವದ ಪೊಲೀಸ್ ತಂಡ ತನಿಖೆ ನಡೆಸಿ ದೀಪಾಳನ್ನು ಬಂಧಿಸಿದೆ.ಬಂಧಿತೆಯಿಂದ ಒಟ್ಟು 32.86 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಇದರಲ್ಲಿ ಫಾರ್ಚುನರ್ ಕಾರು, ಮಾರುತಿ ಸುಜುಕಿ ಎಸ್-ಕ್ರಾಸ್ ಕಾರು, 11 ಮೊಬೈಲ್ ಫೋನ್‌ಗಳು, ಒಂದು ಟ್ಯಾಬ್, ಒಂದು ಡೊಂಗಲ್, ಮೂರು ಕಾರಿನ ಕೀಗಳು ಹಾಗೂ 14 ಸಾವಿರ ರೂ. ನಗದು ಸೇರಿವೆ. ಪರಾರಿಯಾದ ಮತ್ತೊಬ್ಬ ಆರೋಪಿಯನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದು, ತನಿಖೆ ಮುಂದುವರಿದಿದೆ.

ವರದಿ : ಗಣೇಶ್ ರಿಪ್ಪನ್ ಪೇಟೆ

  • malnadsuddi36@gmail.com

    ಮಲ್ನಾಡ್ ಸುದ್ದಿ ಇದು ಕೇವಲ ಸುದ್ದಿ ವಾಹಿನಿಯಲ್ಲ ಮಲ್ನಾಡ್ ಸುದ್ದಿ ಇದು ಮಲೆನಾಡ ಜನರ ಧ್ವನಿ ಜನರೊಂದಿಗೆ ಸೇರಿ ಅನ್ಯಾಯದ ವಿರುದ್ಧ ಹೋರಾಡುವುದು ನಮ್ಮ ಮಲ್ನಾಡ್ ಸುದ್ದಿ ತಂಡ ನೈಜ್ಯ ಅಪರಾಧ. ಪ್ರಸ್ತುತ ರಾಜಕೀಯ. ಕ್ರೀಡೆ. ಸಾಂಸ್ಕೃತಿಕ ಕಾರ್ಯಕ್ರಮ. ಅನ್ಯಾಯದ ವಿರುದ್ಧ ಹೋರಾಟ. ಉಚಿತ ಕಾನೂನು ಸಲಹೆ. ಸಿನಿಮಾ ಸ್ಟೋರಿಗಳು. ಸರ್ಕಾರದ ಅನುದಾನಗಳ ಬಗ್ಗೆ ಸಮಗ್ರ ಮಾಹಿತಿ. ಒಟ್ಟಾರೆಯಾಗಿ ಸಮಾಜವನ್ನು ಸುಧಾರಿಸುವುದು ನಮ್ಮ ಮಲ್ನಾಡ್ ಸುದ್ದಿ ತಂಡದ ಗುರಿ

    Related Posts

    ಬಾವಿ ಅನುದಾನದ ಹಣ ಇದ್ದರೂ ಗ್ರಾಮಸ್ಥರಿಂದ 60000 ಹಣ ವಸೂಲಿ:

    Despite the government releasing funds for the construction of a well in Kudumallige Gram Panchayat limits of Thirthahalli taluk, money has been collected from the villagers ತೀರ್ಥಹಳ್ಳಿ : ತಾಲೂಕಿನ ಕುಡುಮಲ್ಲಿಗೆ…

    ಶಿವಮೊಗ್ಗ ಹಿಂದುಳಿದ ವರ್ಗಗಳ ಕುರುವಳ್ಳಿ ನಾಗರಾಜ್ ಪ್ರಧಾನ ಕಾರ್ಯದರ್ಶಿ ಆಗಿ ಆಯ್ಕೆ:

    Shivamogga: Kuruvalli Nagaraj has been appointed as the General Secretary of the Shivamogga District Congress Backward Classes (Youth Wing) unit. ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ (ಯುವ ಸಂಘಟನೆ) ಘಟಕದ ಪ್ರಧಾನ…

    Leave a Reply

    Your email address will not be published. Required fields are marked *

    You Missed

    ಬಾವಿ ಅನುದಾನದ ಹಣ ಇದ್ದರೂ ಗ್ರಾಮಸ್ಥರಿಂದ 60000 ಹಣ ವಸೂಲಿ:

    ಶಿವಮೊಗ್ಗ ಹಿಂದುಳಿದ ವರ್ಗಗಳ ಕುರುವಳ್ಳಿ ನಾಗರಾಜ್ ಪ್ರಧಾನ ಕಾರ್ಯದರ್ಶಿ ಆಗಿ ಆಯ್ಕೆ:

    ಚಿನ್ನ ಕಳವು ಆರೋಪಿ ಬಂಧನ 30 ಗ್ರಾಂ ಚಿನ್ನದ ಗಟ್ಟಿ ಪೊಲೀಸರ ವಶಕ್ಕೆ

    ಫೇಸ್ಬುಕ್ ಇನ್ಸ್ಟಾಗ್ರಾಮ್ ಮೂಲಕ ಹನಿ ಟ್ರ್ಯಾಪ್ ಪ್ಯಾಷನ್ ಡಿಸೈನರ್ ಬಂಧನ:

    ಟ್ರಾಕ್ಟರ್ ಪಲ್ಟಿ: ಬಾಲಕ ಸ್ಥಳದಲ್ಲೇ ಸಾವು

    ಹನಿ ಟ್ರಾಪ್. ಆರೋಪಿ ಗಳ ಬಂಧನ