ಶಿವಮೊಗ್ಗ ಹಿಂದುಳಿದ ವರ್ಗಗಳ ಕುರುವಳ್ಳಿ ನಾಗರಾಜ್ ಪ್ರಧಾನ ಕಾರ್ಯದರ್ಶಿ ಆಗಿ ಆಯ್ಕೆ:

Shivamogga: Kuruvalli Nagaraj has been appointed as the General Secretary of the Shivamogga District Congress Backward Classes (Youth Wing) unit.

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ (ಯುವ ಸಂಘಟನೆ) ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಕುರುವಳ್ಳಿ ನಾಗರಾಜ್ ಅವರನ್ನು ನೇಮಕ ಮಾಡಲಾಗಿದೆ.
ಡಿಸಿಸಿ ಬ್ಯಾಂಕ್ ಹಾಗೂ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಡಾ. ಆರ್.ಎಂ. ಮಂಜುನಾಥ ಗೌಡ ಅವರ ಆಪ್ತ ವಲಯದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಕುರುವಳ್ಳಿ ನಾಗರಾಜ್ ಅವರಿಗೆ ಈ ಜವಾಬ್ದಾರಿ ನೀಡಲಾಗಿದೆ.


ರಾಜ್ಯ ಕೆಪಿಸಿಸಿ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರು ಹಾಗೂ ಶಿಕ್ಷಣ ಸಚಿವರಾದ ಎಸ್. ಮಧು ಬಂಗಾರಪ್ಪ ಅವರ ಆದೇಶದ ಮೇರೆಗೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ರಮೇಶ್ ಶಂಕರಘಟ್ಟ ಅವರು ಕುರುವಳ್ಳಿ ನಾಗರಾಜ್ ಅವರ ನೇಮಕಾತಿಯನ್ನು ಪ್ರಕಟಿಸಿದ್ದಾರೆ.
ಪ್ರಸ್ತುತ ತೀರ್ಥಹಳ್ಳಿ ಆರ್ಯ ಈಡಿಗ ಸಂಘದ ನಿರ್ದೇಶಕರಾಗಿರುವ ಕುರುವಳ್ಳಿ ನಾಗರಾಜ್ ಅವರು ತೀರ್ಥಹಳ್ಳಿ ಜಯ ಕರ್ನಾಟಕ ಸಂಘಟನೆಯ ಅಧ್ಯಕ್ಷರಾಗಿಯೂ ಹಾಗೂ ತಾಲ್ಲೂಕು ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ವಿವಿಧ ಸಾಮಾಜಿಕ ಮತ್ತು ಸಂಘಟನಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಅವರ ಸೇವೆಯನ್ನು ಗುರುತಿಸಿ ಕಾಂಗ್ರೆಸ್ ಪಕ್ಷ ಈ ಮಹತ್ವದ ಜವಾಬ್ದಾರಿಯನ್ನು ನೀಡಿದೆ ಎಂದು ಅವರ ಆಪ್ತರು ಸಂತೋಷ ವ್ಯಕ್ತಪಡಿಸಿದ್ದಾರೆ.

ಸುದ್ದಿ ಸಹಕಾರ :ಸಾನಿಧ್ಯ ನ್ಯೂಸ್ ಆಫ್ ಕರ್ನಾಟಕ

ವರದಿ : ಗಣೇಶ್ ರಿಪ್ಪನ್ ಪೇಟೆ

  • malnadsuddi36@gmail.com

    ಮಲ್ನಾಡ್ ಸುದ್ದಿ ಇದು ಕೇವಲ ಸುದ್ದಿ ವಾಹಿನಿಯಲ್ಲ ಮಲ್ನಾಡ್ ಸುದ್ದಿ ಇದು ಮಲೆನಾಡ ಜನರ ಧ್ವನಿ ಜನರೊಂದಿಗೆ ಸೇರಿ ಅನ್ಯಾಯದ ವಿರುದ್ಧ ಹೋರಾಡುವುದು ನಮ್ಮ ಮಲ್ನಾಡ್ ಸುದ್ದಿ ತಂಡ ನೈಜ್ಯ ಅಪರಾಧ. ಪ್ರಸ್ತುತ ರಾಜಕೀಯ. ಕ್ರೀಡೆ. ಸಾಂಸ್ಕೃತಿಕ ಕಾರ್ಯಕ್ರಮ. ಅನ್ಯಾಯದ ವಿರುದ್ಧ ಹೋರಾಟ. ಉಚಿತ ಕಾನೂನು ಸಲಹೆ. ಸಿನಿಮಾ ಸ್ಟೋರಿಗಳು. ಸರ್ಕಾರದ ಅನುದಾನಗಳ ಬಗ್ಗೆ ಸಮಗ್ರ ಮಾಹಿತಿ. ಒಟ್ಟಾರೆಯಾಗಿ ಸಮಾಜವನ್ನು ಸುಧಾರಿಸುವುದು ನಮ್ಮ ಮಲ್ನಾಡ್ ಸುದ್ದಿ ತಂಡದ ಗುರಿ

    Related Posts

    ಬಾವಿ ಅನುದಾನದ ಹಣ ಇದ್ದರೂ ಗ್ರಾಮಸ್ಥರಿಂದ 60000 ಹಣ ವಸೂಲಿ:

    Despite the government releasing funds for the construction of a well in Kudumallige Gram Panchayat limits of Thirthahalli taluk, money has been collected from the villagers ತೀರ್ಥಹಳ್ಳಿ : ತಾಲೂಕಿನ ಕುಡುಮಲ್ಲಿಗೆ…

    ಚಿನ್ನ ಕಳವು ಆರೋಪಿ ಬಂಧನ 30 ಗ್ರಾಂ ಚಿನ್ನದ ಗಟ್ಟಿ ಪೊಲೀಸರ ವಶಕ್ಕೆ

    The Harohalli Police have successfully cracked a house burglary case reported in Chikkareddoddi, arresting one individual and recovering gold worth approximately ₹4 Lakhs. ರಾಮನಗರ: ಹಾರೋಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ…

    Leave a Reply

    Your email address will not be published. Required fields are marked *

    You Missed

    ಬಾವಿ ಅನುದಾನದ ಹಣ ಇದ್ದರೂ ಗ್ರಾಮಸ್ಥರಿಂದ 60000 ಹಣ ವಸೂಲಿ:

    ಶಿವಮೊಗ್ಗ ಹಿಂದುಳಿದ ವರ್ಗಗಳ ಕುರುವಳ್ಳಿ ನಾಗರಾಜ್ ಪ್ರಧಾನ ಕಾರ್ಯದರ್ಶಿ ಆಗಿ ಆಯ್ಕೆ:

    ಚಿನ್ನ ಕಳವು ಆರೋಪಿ ಬಂಧನ 30 ಗ್ರಾಂ ಚಿನ್ನದ ಗಟ್ಟಿ ಪೊಲೀಸರ ವಶಕ್ಕೆ

    ಫೇಸ್ಬುಕ್ ಇನ್ಸ್ಟಾಗ್ರಾಮ್ ಮೂಲಕ ಹನಿ ಟ್ರ್ಯಾಪ್ ಪ್ಯಾಷನ್ ಡಿಸೈನರ್ ಬಂಧನ:

    ಟ್ರಾಕ್ಟರ್ ಪಲ್ಟಿ: ಬಾಲಕ ಸ್ಥಳದಲ್ಲೇ ಸಾವು

    ಹನಿ ಟ್ರಾಪ್. ಆರೋಪಿ ಗಳ ಬಂಧನ