ಮದುವೆ ವಿಷಯ ಮುಚ್ಚಿಟ್ಟು ಮೋಸ ಲಿವ್ ಇನ್ ಗೆಳತಿಯನ್ನು ವೈರಿನಿಂದ ಕೊಂದ ವಿವಾಹಿತ

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ವರ್ತೂರು ಪ್ರದೇಶದಲ್ಲಿ ಭಯಾನಕ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮದುವೆಯಾಗಿರುವ ವಿಚಾರವನ್ನು ಮುಚ್ಚಿಟ್ಟು ಲಿವ್-ಇನ್ ಸಂಬಂಧದಲ್ಲಿದ್ದ ಯುವತಿಯನ್ನು ಆಕೆಯ ಗೆಳೆಯನೇ ಕತ್ತು ಬಿಗಿದು ಕೊಲೆ ಮಾಡಿದ ಘಟನೆ ನಡೆದಿದೆ. ಕೊಡಗು ಜಿಲ್ಲೆಯ ಮೂಲದ ರಂಜಿತಾ (23) ಈ ಘಟನೆದಲ್ಲಿ ಮೃತಪಟ್ಟ ಯುವತಿ.
ಪೊಲೀಸರು ನೀಡಿದ ಮಾಹಿತಿಯಂತೆ, ಕೊಡಗಿನಿಂದ ಉದ್ಯೋಗದ ಹುಡುಕಾಟದಲ್ಲಿ ಬೆಂಗಳೂರಿಗೆ ಬಂದಿದ್ದ ರಂಜಿತಾಳಿಗೆ ಅಯ್ಯಪ್ಪ ಎಂಬಾತ ಪರಿಚಯವಾಗಿದ್ದು, ನಂತರ ಇಬ್ಬರ ನಡುವೆ ಪ್ರೀತಿ ಬೆಳೆದಿತ್ತು. ಕೆಲಕಾಲದಿಂದ ಇಬ್ಬರೂ ವರ್ತೂರಿನ ಬಾಡಿಗೆ ಮನೆಯೊಂದರಲ್ಲಿ ಲಿವ್-ಇನ್ ಸಂಬಂಧದಲ್ಲಿ ವಾಸವಾಗಿದ್ದರು. ಅಯ್ಯಪ್ಪ ತನ್ನನ್ನು ಮದುವೆಯಾಗುತ್ತಾನೆ ಎಂದು ನಂಬಿದ್ದ ರಂಜಿತಾಳಿಗೆ, ಆತ ಈಗಾಗಲೇ ವಿವಾಹಿತನಾಗಿರುವ ವಿಚಾರ ಇತ್ತೀಚೆಗೆ ತಿಳಿದುಬಂದಿತ್ತು.
ಈ ವಿಷಯದ ಬಗ್ಗೆ ಇಬ್ಬರ ನಡುವೆ ಮನೆಯಲ್ಲಿ ಜಗಳ ನಡೆದಿದ್ದು, ಮಾತಿನ ಚಕಮಕಿ ತಾರಕಕ್ಕೇರಿದೆ. ಜಗಳದ ವೇಳೆ ಆಕ್ರೋಶಗೊಂಡ ಅಯ್ಯಪ್ಪ, ಮನೆಯಲ್ಲಿದ್ದ ಎಲೆಕ್ಟ್ರಿಕಲ್ ವೈಯರ್‌ನಿಂದ ರಂಜಿತಾಳ ಕತ್ತನ್ನು ಬಿಗಿದು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಯುವತಿ ಪ್ರಾಣ ಉಳಿಸಿಕೊಳ್ಳಲು ಪ್ರಯತ್ನಿಸಿದರೂ ಆರೋಪಿ ಕ್ರೂರವಾಗಿ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.
ಘಟನೆಯ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಮಾಹಿತಿ ತಿಳಿದ ತಕ್ಷಣ ವರ್ತೂರು ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ನಂತರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಈ ಸಂಬಂಧ ವರ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

ವರದಿ : ಗಣೇಶ್ ರಿಪ್ಪನ್ ಪೇಟೆ

malnadsuddi36@gmail.com

ಮಲ್ನಾಡ್ ಸುದ್ದಿ ಇದು ಕೇವಲ ಸುದ್ದಿ ವಾಹಿನಿಯಲ್ಲ ಮಲ್ನಾಡ್ ಸುದ್ದಿ ಇದು ಮಲೆನಾಡ ಜನರ ಧ್ವನಿ ಜನರೊಂದಿಗೆ ಸೇರಿ ಅನ್ಯಾಯದ ವಿರುದ್ಧ ಹೋರಾಡುವುದು ನಮ್ಮ ಮಲ್ನಾಡ್ ಸುದ್ದಿ ತಂಡ ನೈಜ್ಯ ಅಪರಾಧ. ಪ್ರಸ್ತುತ ರಾಜಕೀಯ. ಕ್ರೀಡೆ. ಸಾಂಸ್ಕೃತಿಕ ಕಾರ್ಯಕ್ರಮ. ಅನ್ಯಾಯದ ವಿರುದ್ಧ ಹೋರಾಟ. ಉಚಿತ ಕಾನೂನು ಸಲಹೆ. ಸಿನಿಮಾ ಸ್ಟೋರಿಗಳು. ಸರ್ಕಾರದ ಅನುದಾನಗಳ ಬಗ್ಗೆ ಸಮಗ್ರ ಮಾಹಿತಿ. ಒಟ್ಟಾರೆಯಾಗಿ ಸಮಾಜವನ್ನು ಸುಧಾರಿಸುವುದು ನಮ್ಮ ಮಲ್ನಾಡ್ ಸುದ್ದಿ ತಂಡದ ಗುರಿ

Related Posts

ರಿಪ್ಪನ್ ಪೇಟೆ: ಬೈಕ್–ಕಾರ್ ಡಿಕ್ಕಿ, ಸವಾರನಿಗೆ ಗಂಭೀರ ಗಾಯ

ರಿಪ್ಪನ್ ಪೇಟೆ ಸಮೀಪದ ತೀರ್ಥಹಳ್ಳಿ ರಸ್ತೆಯಲ್ಲಿ ಇಂದು ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ರಸ್ತೆ ಬದಿಯಿಂದ ಅಡ್ಡಲಾಗಿ ಕಾರನ್ನು ತಿರುಗಿಸುವ ವೇಳೆ ಎದುರು ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಬೈಕ್…

ಕೊಳವಳ್ಳಿ ಗ್ರಾಮದಲ್ಲಿ ಯುವಕ ಆತ್ಮಹತ್ಯೆಕಬಡ್ಡಿ ಆಟಗಾರ ಸುನೀಲ್ ದುರ್ಮರಣ…!!

ರಿಪ್ಪನ್ ಪೇಟೆ ಸಮೀಪದ ಕೊಳವಳ್ಳಿ ಗ್ರಾಮದಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ವರದಿಯಾಗಿದೆ.ಮೃತ ಯುವಕನನ್ನು ಕೊಳವಳ್ಳಿ ಗ್ರಾಮದ ಸುನೀಲ್ ಬಿನ್ ವೀರಭದ್ರ (23) ಎಂದು ಗುರುತಿಸಲಾಗಿದೆ. ಬುಧವಾರ ಸಂಜೆ ಕೆಲಸ ಮುಗಿಸಿಕೊಂಡು ಮನೆಗೆ ಬಂದ ಸುನೀಲ್, ನಂತರ…

Leave a Reply

Your email address will not be published. Required fields are marked *

You Missed

ರಿಪ್ಪನ್ ಪೇಟೆ: ಬೈಕ್–ಕಾರ್ ಡಿಕ್ಕಿ, ಸವಾರನಿಗೆ ಗಂಭೀರ ಗಾಯ

ಕೊಳವಳ್ಳಿ ಗ್ರಾಮದಲ್ಲಿ ಯುವಕ ಆತ್ಮಹತ್ಯೆಕಬಡ್ಡಿ ಆಟಗಾರ ಸುನೀಲ್ ದುರ್ಮರಣ…!!

6–9 ಮೊಬೈಲ್ ವೀಕ್ಷಣೆ ಬ್ಯಾನ್ ಡಂಗುರ: ಮಕ್ಕಳಿಗೆ ಅಲ್ಲ, ತಂದೆತಾಯಿಗಳಿಗೆ ಮೊದಲು ನಿಯಮ

ಒಕ್ಕನೆ ಬಾವಿ ಗ್ರಾಮದಲ್ಲಿ ಅರಣ್ಯ ಇಲಾಖೆಯ ವಿರುದ್ಧ ಅಹೋರಾತ್ರಿ ಧರಣಿ

ರಿಪ್ಪನ್‌ಪೇಟೆಯಲ್ಲಿ ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ

ನಕಲಿ ಬಂಗಾರ ನೀಡಿ ವಂಚನೆ- ಮಹಿಳೆ ಬಂಧನ