ರಾಷ್ಟ್ರೀಯ ಏಕತಾ ಶಿಬಿರದಲ್ಲಿ ಕುವೆಂಪು ವಿವಿ ವಿದ್ಯಾರ್ಥಿಗಳ ಮೆರುಗುವಿವಿಧ ಸ್ಪರ್ಧೆಗಳಲ್ಲಿ ಬಹುಮಾನ – ಏಳು ದಿನಗಳ ಶಿಬಿರದಲ್ಲಿ ಒಗ್ಗಟ್ಟಿನ ಸಂದೇಶ ಹಂಚಿಕೆ

ಶಿವಮೊಗ್ಗ: ಪಶ್ಚಿಮ ಬಂಗಾಳದ ಡೈಮಂಡ್ ಹಾರ್ಬರ್‌ನ ನಿಯೋಟಿಯಾ ವಿಶ್ವವಿದ್ಯಾಲಯದ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಏಕತಾ ಶಿಬಿರದಲ್ಲಿ ಕುವೆಂಪು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ತಂಡ ಉತ್ತಮ ಸಾಧನೆ ಮಾಡಿ ಗಮನಸೆಳೆದಿದೆ.

ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನಗಳನ್ನು ಗಳಿಸಿರುವುದು ವಿಶೇಷವಾಗಿದೆ.ಏಳು ದಿನಗಳ ಕಾಲ ನಡೆದ ಈ ಶಿಬಿರದಲ್ಲಿ ದೇಶದ ವಿವಿಧ ರಾಜ್ಯಗಳಿಂದ ಬಂದ ವಿದ್ಯಾರ್ಥಿಗಳೊಂದಿಗೆ ಪರಸ್ಪರ ಸಂವಾದ ನಡೆಸಿದ ತಂಡ, ರಾಷ್ಟ್ರೀಯ ಏಕತೆ ಮತ್ತು ಸೇವಾ ಮನೋಭಾವದ ಮಹತ್ವವನ್ನು ಅರಿತುಕೊಂಡಿದೆ. ಈ ಮೂಲಕ ಒಗ್ಗಟ್ಟಿನ ಸಂದೇಶವನ್ನು ಪರಿಣಾಮಕಾರಿಯಾಗಿ ಹಂಚುವಲ್ಲಿ ಯಶಸ್ವಿಯಾಗಿದೆ

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತೀರ್ಥಹಳ್ಳಿ ನಿರೀಕ್ಷಾ ಕೆ.ಬಿ, ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಹೇಮಂತ್ ಗೌಡ, ರುಚಿತಾ ಬಿ.ಎಸ್, ಕುಮದ್ವತಿ ಕಾಲೇಜಿನ ಚೇತನ್ ಕುಮಾರ್, ಸಹ್ಯಾದ್ರಿ ಕಾಲೇಜಿನ ಮಾರುತಿ ಎಸ್, ಶರಾವತಿ ಕಾಲೇಜಿನ ಸಾತ್ವಿಕ್ ಎಂ.ಎಸ್, ಇಂದಿರಾ ಗಾಂಧಿ ಮಹಿಳಾ ಕಾಲೇಜಿನ ಶ್ವೇತಾ, ಸರ್ಕಾರಿ ಕಾಲೇಜಿನ ಶ್ರೀಧರ ನಾಯ್ಕ, ನಿವೇದಿತಾ ಸೇರಿದಂತೆ ಹಲವು ವಿದ್ಯಾರ್ಥಿಗಳು ತಂಡದಲ್ಲಿ ಭಾಗವಹಿಸಿದ್ದರು.

ಸ್ಪರ್ಧೆಗಳ ವಿಭಾಗದಲ್ಲಿ ಭಾಷಣದಲ್ಲಿ ದ್ವಿತೀಯ ಸ್ಥಾನ, ರಂಗೋಲಿಯಲ್ಲಿ ತೃತೀಯ ಸ್ಥಾನ, ಗೀತಗಾಯನದಲ್ಲಿ ತೃತೀಯ ಸ್ಥಾನ ಹಾಗೂ ರೀಲ್ಸ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ತಂಡ ತನ್ನ ಪ್ರತಿಭೆಯನ್ನು ಸಾಬೀತುಪಡಿಸಿದೆ.“

ವಿದ್ಯಾರ್ಥಿಗಳು ಉತ್ತಮವಾಗಿ ಪ್ರದರ್ಶನ ನೀಡಿದ್ದು, ತಂಡದ ಶ್ರಮ ಮತ್ತು ಸಮನ್ವಯವೇ ಈ ಸಾಧನೆಗೆ ಕಾರಣವಾಗಿದೆ,” ಎಂದು ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಡಾ. ಪ್ರವೀಣ್ ಬಿ.ಎನ್ ತಿಳಿಸಿದ್ದಾರೆ.

ವರದಿ : ಕೆರೆಹಳ್ಳಿ ಅಂಜನ್

  • malnadsuddi36@gmail.com

    ಮಲ್ನಾಡ್ ಸುದ್ದಿ ಇದು ಕೇವಲ ಸುದ್ದಿ ವಾಹಿನಿಯಲ್ಲ ಮಲ್ನಾಡ್ ಸುದ್ದಿ ಇದು ಮಲೆನಾಡ ಜನರ ಧ್ವನಿ ಜನರೊಂದಿಗೆ ಸೇರಿ ಅನ್ಯಾಯದ ವಿರುದ್ಧ ಹೋರಾಡುವುದು ನಮ್ಮ ಮಲ್ನಾಡ್ ಸುದ್ದಿ ತಂಡ ನೈಜ್ಯ ಅಪರಾಧ. ಪ್ರಸ್ತುತ ರಾಜಕೀಯ. ಕ್ರೀಡೆ. ಸಾಂಸ್ಕೃತಿಕ ಕಾರ್ಯಕ್ರಮ. ಅನ್ಯಾಯದ ವಿರುದ್ಧ ಹೋರಾಟ. ಉಚಿತ ಕಾನೂನು ಸಲಹೆ. ಸಿನಿಮಾ ಸ್ಟೋರಿಗಳು. ಸರ್ಕಾರದ ಅನುದಾನಗಳ ಬಗ್ಗೆ ಸಮಗ್ರ ಮಾಹಿತಿ. ಒಟ್ಟಾರೆಯಾಗಿ ಸಮಾಜವನ್ನು ಸುಧಾರಿಸುವುದು ನಮ್ಮ ಮಲ್ನಾಡ್ ಸುದ್ದಿ ತಂಡದ ಗುರಿ

    Related Posts

    ರಿಪ್ಪನ್ ಪೇಟೆ: ಬೈಕ್–ಕಾರ್ ಡಿಕ್ಕಿ, ಸವಾರನಿಗೆ ಗಂಭೀರ ಗಾಯ

    ರಿಪ್ಪನ್ ಪೇಟೆ ಸಮೀಪದ ತೀರ್ಥಹಳ್ಳಿ ರಸ್ತೆಯಲ್ಲಿ ಇಂದು ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ರಸ್ತೆ ಬದಿಯಿಂದ ಅಡ್ಡಲಾಗಿ ಕಾರನ್ನು ತಿರುಗಿಸುವ ವೇಳೆ ಎದುರು ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಬೈಕ್…

    ಕೊಳವಳ್ಳಿ ಗ್ರಾಮದಲ್ಲಿ ಯುವಕ ಆತ್ಮಹತ್ಯೆಕಬಡ್ಡಿ ಆಟಗಾರ ಸುನೀಲ್ ದುರ್ಮರಣ…!!

    ರಿಪ್ಪನ್ ಪೇಟೆ ಸಮೀಪದ ಕೊಳವಳ್ಳಿ ಗ್ರಾಮದಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ವರದಿಯಾಗಿದೆ.ಮೃತ ಯುವಕನನ್ನು ಕೊಳವಳ್ಳಿ ಗ್ರಾಮದ ಸುನೀಲ್ ಬಿನ್ ವೀರಭದ್ರ (23) ಎಂದು ಗುರುತಿಸಲಾಗಿದೆ. ಬುಧವಾರ ಸಂಜೆ ಕೆಲಸ ಮುಗಿಸಿಕೊಂಡು ಮನೆಗೆ ಬಂದ ಸುನೀಲ್, ನಂತರ…

    Leave a Reply

    Your email address will not be published. Required fields are marked *

    You Missed

    ರಿಪ್ಪನ್ ಪೇಟೆ: ಬೈಕ್–ಕಾರ್ ಡಿಕ್ಕಿ, ಸವಾರನಿಗೆ ಗಂಭೀರ ಗಾಯ

    ಕೊಳವಳ್ಳಿ ಗ್ರಾಮದಲ್ಲಿ ಯುವಕ ಆತ್ಮಹತ್ಯೆಕಬಡ್ಡಿ ಆಟಗಾರ ಸುನೀಲ್ ದುರ್ಮರಣ…!!

    6–9 ಮೊಬೈಲ್ ವೀಕ್ಷಣೆ ಬ್ಯಾನ್ ಡಂಗುರ: ಮಕ್ಕಳಿಗೆ ಅಲ್ಲ, ತಂದೆತಾಯಿಗಳಿಗೆ ಮೊದಲು ನಿಯಮ

    ಒಕ್ಕನೆ ಬಾವಿ ಗ್ರಾಮದಲ್ಲಿ ಅರಣ್ಯ ಇಲಾಖೆಯ ವಿರುದ್ಧ ಅಹೋರಾತ್ರಿ ಧರಣಿ

    ರಿಪ್ಪನ್‌ಪೇಟೆಯಲ್ಲಿ ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ

    ನಕಲಿ ಬಂಗಾರ ನೀಡಿ ವಂಚನೆ- ಮಹಿಳೆ ಬಂಧನ