ಕೆಂಚನಾಳದಲ್ಲಿ ಯುವತಿ ನಾಪತ್ತೆ: ಮಾಹಿತಿ ನೀಡಲು ಸಾರ್ವಜನಿಕರಲ್ಲಿ ಮನವಿಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಕೆಂಚನಾಳ ಗ್ರಾಮದ ಗೌಡಕೊಪ್ಪ ನಿವಾಸಿಯಾದ ರಕ್ಷಿತಾ ಜಿ.ಆರ್ (18) ಎಂಬ ಯುವತಿ ನಾಪತ್ತೆಯಾಗಿರುವ ಕುರಿತು ಪ್ರಕರಣ ದಾಖಲಾಗಿದೆ.ರಕ್ಷಿತಾ ಅವರು ರಂಗನಾಥ್ ಅವರ ಮಗಳಾಗಿದ್ದು, 21.03.2026ರಂದು ಬೆಳಿಗ್ಗೆ ಸುಮಾರು 11 ಗಂಟೆ ವೇಳೆಗೆ ತಮ್ಮ ಮನೆಯಿಂದ ಹೊರಟಿದ್ದರು. ಆದರೆ ನಂತರ ಮನೆಗೆ ಹಿಂದಿರುಗದೆ ಇರುವುದರಿಂದ ಕುಟುಂಬದವರು ಆತಂಕದಲ್ಲಿದ್ದಾರೆ.ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಯುವತಿಯ ಹುಡುಕಾಟ ನಡೆಸುತ್ತಿದ್ದಾರೆ.ರಕ್ಷಿತಾ ಅವರ ಕುರಿತು ಯಾವುದೇ ಮಾಹಿತಿ ಲಭ್ಯವಾದಲ್ಲಿ ಅಥವಾ ಎಲ್ಲಿಯಾದರೂ ಕಂಡುಬಂದಲ್ಲಿ, ತಕ್ಷಣವೇ ಸಮೀಪದ ಪೊಲೀಸ್ ಠಾಣೆ ಅಥವಾ ನೀಡಿರುವ ದೂರವಾಣಿ ಸಂಖ್ಯೆಗೆ ಮಾಹಿತಿ ನೀಡುವಂತೆ ಕುಟುಂಬದವರು ಹಾಗೂ ಸಂಬಂಧಿತರು ಸಾರ್ವಜನಿಕರಲ್ಲಿ ವಿನಂತಿಸಿಕೊಂಡಿದ್ದಾರೆ.

ವರದಿ : ಕೆರೆಹಳ್ಳಿ ಅಂಜನ್

By Anjan Kerehalli

ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ನಮ್ಮ ಧ್ವನಿ, ನಿಮ್ಮ ಹಕ್ಕು ಮಲ್ಲಾಡ್ ಸುದ್ದಿ ಎಕ್ಸ್ಪ್ರೆಸ್ ದು ಮಲೆನಾಡ ಜನರ ಧ್ವನಿ “ನಮ್ಮ ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ಜನರೊಂದಿಗೆ, ಜನರಿಗಾಗಿ.”

Leave a Reply

Your email address will not be published. Required fields are marked *