ಕುರಿ ಮೇಕೆ ಕಳ್ಳತನ ಭೇದಿಸಿದ ಬಿಡದಿ ಪೊಲೀಸರು: ಇಬ್ಬರು ಆರೋಪಿಗಳ ಬಂಧನ 3 ಪ್ರಕರಣಗಳು ಪತ್ತೆ

ಬಿಡದಿ: ಕುರಿ ಮತ್ತು ಮೇಕೆಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಬಿಡದಿ ಪೊಲೀಸರು ಯಶಸ್ವಿಯಾಗಿದ್ದಾರೆ. ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕ ಸೇರಿ ಒಟ್ಟು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.


ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯ ತಾಳಗುಪ್ಪೆ ಗ್ರಾಮದ ಕುರಿ–ಮೇಕೆ ಫಾರಂನ ಬೀಗ ಮುರಿದು ಕಳ್ಳತನ ನಡೆದ ಘಟನೆ ಸಂಬಂಧ ಮೊ. ಸಂ: 72/2026 ಅಡಿಯಲ್ಲಿ ಕಲಂ 331(4), 305 BNS ಪ್ರಕಾರ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದರು.
ತನಿಖೆ ವೇಳೆ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿ ವಿಚಾರಣೆ ನಡೆಸಿದಾಗ, ಸುಮಾರು 2.80 ಲಕ್ಷ ರೂಪಾಯಿ ಮೌಲ್ಯದ ಕುರಿ ಮತ್ತು ಮೇಕೆಗಳನ್ನು ವಶಪಡಿಸಿಕೊಂಡಿದ್ದಾರೆ. ಇದಲ್ಲದೆ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ 2 ದ್ವಿಚಕ್ರ ವಾಹನಗಳು ಹಾಗೂ 1 ಓಮಿನಿ ಕಾರನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕಾರ್ಯಾಚರಣೆಯ ಮೂಲಕ ಒಟ್ಟು 3 ಕಳ್ಳತನ ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದು, ಬಿಡದಿ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ತಂಡದ ಕಾರ್ಯಕ್ಷಮತೆ ಗಮನಾರ್ಹವಾಗಿದೆ.
ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ

  • malnadsuddi36@gmail.com

    ಮಲ್ನಾಡ್ ಸುದ್ದಿ ಇದು ಕೇವಲ ಸುದ್ದಿ ವಾಹಿನಿಯಲ್ಲ ಮಲ್ನಾಡ್ ಸುದ್ದಿ ಇದು ಮಲೆನಾಡ ಜನರ ಧ್ವನಿ ಜನರೊಂದಿಗೆ ಸೇರಿ ಅನ್ಯಾಯದ ವಿರುದ್ಧ ಹೋರಾಡುವುದು ನಮ್ಮ ಮಲ್ನಾಡ್ ಸುದ್ದಿ ತಂಡ ನೈಜ್ಯ ಅಪರಾಧ. ಪ್ರಸ್ತುತ ರಾಜಕೀಯ. ಕ್ರೀಡೆ. ಸಾಂಸ್ಕೃತಿಕ ಕಾರ್ಯಕ್ರಮ. ಅನ್ಯಾಯದ ವಿರುದ್ಧ ಹೋರಾಟ. ಉಚಿತ ಕಾನೂನು ಸಲಹೆ. ಸಿನಿಮಾ ಸ್ಟೋರಿಗಳು. ಸರ್ಕಾರದ ಅನುದಾನಗಳ ಬಗ್ಗೆ ಸಮಗ್ರ ಮಾಹಿತಿ. ಒಟ್ಟಾರೆಯಾಗಿ ಸಮಾಜವನ್ನು ಸುಧಾರಿಸುವುದು ನಮ್ಮ ಮಲ್ನಾಡ್ ಸುದ್ದಿ ತಂಡದ ಗುರಿ

    Related Posts

    ರಿಪ್ಪನ್ ಪೇಟೆ: ಬೈಕ್–ಕಾರ್ ಡಿಕ್ಕಿ, ಸವಾರನಿಗೆ ಗಂಭೀರ ಗಾಯ

    ರಿಪ್ಪನ್ ಪೇಟೆ ಸಮೀಪದ ತೀರ್ಥಹಳ್ಳಿ ರಸ್ತೆಯಲ್ಲಿ ಇಂದು ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ರಸ್ತೆ ಬದಿಯಿಂದ ಅಡ್ಡಲಾಗಿ ಕಾರನ್ನು ತಿರುಗಿಸುವ ವೇಳೆ ಎದುರು ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಬೈಕ್…

    ಕೊಳವಳ್ಳಿ ಗ್ರಾಮದಲ್ಲಿ ಯುವಕ ಆತ್ಮಹತ್ಯೆಕಬಡ್ಡಿ ಆಟಗಾರ ಸುನೀಲ್ ದುರ್ಮರಣ…!!

    ರಿಪ್ಪನ್ ಪೇಟೆ ಸಮೀಪದ ಕೊಳವಳ್ಳಿ ಗ್ರಾಮದಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ವರದಿಯಾಗಿದೆ.ಮೃತ ಯುವಕನನ್ನು ಕೊಳವಳ್ಳಿ ಗ್ರಾಮದ ಸುನೀಲ್ ಬಿನ್ ವೀರಭದ್ರ (23) ಎಂದು ಗುರುತಿಸಲಾಗಿದೆ. ಬುಧವಾರ ಸಂಜೆ ಕೆಲಸ ಮುಗಿಸಿಕೊಂಡು ಮನೆಗೆ ಬಂದ ಸುನೀಲ್, ನಂತರ…

    Leave a Reply

    Your email address will not be published. Required fields are marked *

    You Missed

    ರಿಪ್ಪನ್ ಪೇಟೆ: ಬೈಕ್–ಕಾರ್ ಡಿಕ್ಕಿ, ಸವಾರನಿಗೆ ಗಂಭೀರ ಗಾಯ

    ಕೊಳವಳ್ಳಿ ಗ್ರಾಮದಲ್ಲಿ ಯುವಕ ಆತ್ಮಹತ್ಯೆಕಬಡ್ಡಿ ಆಟಗಾರ ಸುನೀಲ್ ದುರ್ಮರಣ…!!

    6–9 ಮೊಬೈಲ್ ವೀಕ್ಷಣೆ ಬ್ಯಾನ್ ಡಂಗುರ: ಮಕ್ಕಳಿಗೆ ಅಲ್ಲ, ತಂದೆತಾಯಿಗಳಿಗೆ ಮೊದಲು ನಿಯಮ

    ಒಕ್ಕನೆ ಬಾವಿ ಗ್ರಾಮದಲ್ಲಿ ಅರಣ್ಯ ಇಲಾಖೆಯ ವಿರುದ್ಧ ಅಹೋರಾತ್ರಿ ಧರಣಿ

    ರಿಪ್ಪನ್‌ಪೇಟೆಯಲ್ಲಿ ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ

    ನಕಲಿ ಬಂಗಾರ ನೀಡಿ ವಂಚನೆ- ಮಹಿಳೆ ಬಂಧನ