ಮಾದಕ ವಸ್ತು ಪ್ರಕರಣ: ನಾಲ್ವರಿಗೆ 10 ವರ್ಷ ಜೈಲು ಶಿಕ್ಷೆ ತಲಾ 1ಲಕ್ಷ ದಂಡ

ರಾಮನಗರ: ಮಾದಕ ವಸ್ತುಗಳನ್ನು ಅಕ್ರಮವಾಗಿ ಸಂಗ್ರಹಿಸಿ ಇಟ್ಟುಕೊಂಡಿದ್ದ ಪ್ರಕರಣದಲ್ಲಿ ನಾಲ್ವರು ಆರೋಪಿಗಳಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ತಲಾ ₹1 ಲಕ್ಷ ದಂಡ ವಿಧಿಸಿ ರಾಮನಗರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ರಾಮನಗರ ಟೌನ್‌ನ ಐಜೂರು ಪೊಲೀಸ್ ಠಾಣಾ ವ್ಯಾಪ್ತಿಯ ಹನುಮಂತನಗರದ ರಾಯರದೊಡ್ಡಿ ಬೀದಿಯ ಮನೆಯೊಂದರಲ್ಲಿ ಮಾದಕ ವಸ್ತು ಸಂಗ್ರಹಿಸಲಾಗಿದೆ ಎಂಬ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ್ದರು. ದಾಳಿಯ ವೇಳೆ ಸುಮಾರು 44 ಕೆ.ಜಿ ತೂಕದ ಮಾದಕ ವಸ್ತುವನ್ನು ವಶಪಡಿಸಿಕೊಂಡು, ಐಜೂರು ಪೊಲೀಸ್ ಠಾಣೆಯಲ್ಲಿ ಮೊ.ಸಂ_____ ಅಡಿ NDPS ಕಾಯ್ದೆಯ 20(c) ವಿಧಿಯಂತೆ ಪ್ರಕರಣ ದಾಖಲಿಸಲಾಗಿತ್ತು.
ಪ್ರಕರಣದಲ್ಲಿ ಆರೋಪಿಗಳಾದ
ಸಿದ್ದಿಕ್ ಬಿನ್ ಸೈಯದ್ ಮೊಹದಿನ್ (ಐಜೂರು, ರಾಮನಗರ),
ಬೈರೇಗೌಡ ಬಿನ್ ನಿಂಗಪ್ಪ (ಹನುಮಂತನಗರ, ರಾಮನಗರ),
ಮೊಹಮದ್ ಅಲಿ ಬಿನ್ ಅಬ್ಬು (ಕಲ್ಲುಬಾಳೆ, ವಿರಾಜಪೇಟೆ, ಕೊಡಗು),
ಮೊಹಮ್ಮದ್ ಇಸ್ಮಾಯಿಲ್ (ಕಲ್ಕುಣಿ ಗ್ರಾಮ, ಮಳವಳ್ಳಿ, ಮಂಡ್ಯ)
ಇವರನ್ನು ಬಂಧಿಸಿ ತನಿಖೆ ನಡೆಸಿ, ನಂತರ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ ಮಾನ್ಯ ನ್ಯಾಯಾಧೀಶರಾದ ಎಂ.ಹೆಚ್. ಅಣ್ಣಯ್ಯ ಅವರು ಆರೋಪಿಗಳು ತಪ್ಪಿತಸ್ಥರು ಎಂದು ಸಾಬೀತಾದ ಹಿನ್ನೆಲೆಯಲ್ಲಿ ನಾಲ್ವರಿಗೆ 10 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ತಲಾ ₹1 ಲಕ್ಷ ದಂಡ ವಿಧಿಸಿ ಆದೇಶಿಸಿದರು.
ಸರ್ಕಾರದ ಪರವಾಗಿ ಸರ್ಕಾರಿ ವಕೀಲರಾದ ವಂಸತಿ ಅಂಗಡಿ ವಾದ ಮಂಡಿಸಿದ್ದು, ತನಿಖಾಧಿಕಾರಿಗಳಾದ ಪಿಎಸ್‌ಐ ಶುಭಾಂಭಿಕ, ಸಿಪಿಐ ನರಸಿಂಹಮೂರ್ತಿ, ಪಿಎಸ್‌ಐ ಜಾರ್ಜ್ ಪ್ರಕಾಶ್ ಹಾಗೂ ಸಿಬ್ಬಂದಿ ಲೋಕೇಶ್ (HC-59), ಶಿವಕುಮಾರ್ (PC-47), ಪ್ರಸನ್ನ (PC-554) ಅವರು ಸಾಕ್ಷಿದಾರರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಮೂಲಕ ಪ್ರಕರಣದಲ್ಲಿ ಶಿಕ್ಷೆ ಖಚಿತಪಡಿಸುವಲ್ಲಿ ಪ್ರಮುಖ ಪಾತ್ರವಹಿಸಿದರು.

ವರದಿ : ಗಣೇಶ್ ರಿಪ್ಪನ್ ಪೇಟೆ

  • malnadsuddi36@gmail.com

    ಮಲ್ನಾಡ್ ಸುದ್ದಿ ಇದು ಕೇವಲ ಸುದ್ದಿ ವಾಹಿನಿಯಲ್ಲ ಮಲ್ನಾಡ್ ಸುದ್ದಿ ಇದು ಮಲೆನಾಡ ಜನರ ಧ್ವನಿ ಜನರೊಂದಿಗೆ ಸೇರಿ ಅನ್ಯಾಯದ ವಿರುದ್ಧ ಹೋರಾಡುವುದು ನಮ್ಮ ಮಲ್ನಾಡ್ ಸುದ್ದಿ ತಂಡ ನೈಜ್ಯ ಅಪರಾಧ. ಪ್ರಸ್ತುತ ರಾಜಕೀಯ. ಕ್ರೀಡೆ. ಸಾಂಸ್ಕೃತಿಕ ಕಾರ್ಯಕ್ರಮ. ಅನ್ಯಾಯದ ವಿರುದ್ಧ ಹೋರಾಟ. ಉಚಿತ ಕಾನೂನು ಸಲಹೆ. ಸಿನಿಮಾ ಸ್ಟೋರಿಗಳು. ಸರ್ಕಾರದ ಅನುದಾನಗಳ ಬಗ್ಗೆ ಸಮಗ್ರ ಮಾಹಿತಿ. ಒಟ್ಟಾರೆಯಾಗಿ ಸಮಾಜವನ್ನು ಸುಧಾರಿಸುವುದು ನಮ್ಮ ಮಲ್ನಾಡ್ ಸುದ್ದಿ ತಂಡದ ಗುರಿ

    Related Posts

    ರಿಪ್ಪನ್ ಪೇಟೆ: ಬೈಕ್–ಕಾರ್ ಡಿಕ್ಕಿ, ಸವಾರನಿಗೆ ಗಂಭೀರ ಗಾಯ

    ರಿಪ್ಪನ್ ಪೇಟೆ ಸಮೀಪದ ತೀರ್ಥಹಳ್ಳಿ ರಸ್ತೆಯಲ್ಲಿ ಇಂದು ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ರಸ್ತೆ ಬದಿಯಿಂದ ಅಡ್ಡಲಾಗಿ ಕಾರನ್ನು ತಿರುಗಿಸುವ ವೇಳೆ ಎದುರು ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಬೈಕ್…

    ಕೊಳವಳ್ಳಿ ಗ್ರಾಮದಲ್ಲಿ ಯುವಕ ಆತ್ಮಹತ್ಯೆಕಬಡ್ಡಿ ಆಟಗಾರ ಸುನೀಲ್ ದುರ್ಮರಣ…!!

    ರಿಪ್ಪನ್ ಪೇಟೆ ಸಮೀಪದ ಕೊಳವಳ್ಳಿ ಗ್ರಾಮದಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ವರದಿಯಾಗಿದೆ.ಮೃತ ಯುವಕನನ್ನು ಕೊಳವಳ್ಳಿ ಗ್ರಾಮದ ಸುನೀಲ್ ಬಿನ್ ವೀರಭದ್ರ (23) ಎಂದು ಗುರುತಿಸಲಾಗಿದೆ. ಬುಧವಾರ ಸಂಜೆ ಕೆಲಸ ಮುಗಿಸಿಕೊಂಡು ಮನೆಗೆ ಬಂದ ಸುನೀಲ್, ನಂತರ…

    Leave a Reply

    Your email address will not be published. Required fields are marked *

    You Missed

    ರಿಪ್ಪನ್ ಪೇಟೆ: ಬೈಕ್–ಕಾರ್ ಡಿಕ್ಕಿ, ಸವಾರನಿಗೆ ಗಂಭೀರ ಗಾಯ

    ಕೊಳವಳ್ಳಿ ಗ್ರಾಮದಲ್ಲಿ ಯುವಕ ಆತ್ಮಹತ್ಯೆಕಬಡ್ಡಿ ಆಟಗಾರ ಸುನೀಲ್ ದುರ್ಮರಣ…!!

    6–9 ಮೊಬೈಲ್ ವೀಕ್ಷಣೆ ಬ್ಯಾನ್ ಡಂಗುರ: ಮಕ್ಕಳಿಗೆ ಅಲ್ಲ, ತಂದೆತಾಯಿಗಳಿಗೆ ಮೊದಲು ನಿಯಮ

    ಒಕ್ಕನೆ ಬಾವಿ ಗ್ರಾಮದಲ್ಲಿ ಅರಣ್ಯ ಇಲಾಖೆಯ ವಿರುದ್ಧ ಅಹೋರಾತ್ರಿ ಧರಣಿ

    ರಿಪ್ಪನ್‌ಪೇಟೆಯಲ್ಲಿ ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ

    ನಕಲಿ ಬಂಗಾರ ನೀಡಿ ವಂಚನೆ- ಮಹಿಳೆ ಬಂಧನ