ಜಸ್ಟೀಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆನಲ್ಲಿ ಅಪರೂಪದ ಹಾಗೂ ಅತ್ಯಂತ ಸವಾಲಿನ ಶಸ್ತ್ರಚಿಕಿತ್ಸೆ

ದೇರಳಕಟ್ಟೆ ಜಸ್ಟೀಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆನಲ್ಲಿ ಅಪರೂಪದ ಹಾಗೂ ಅತ್ಯಂತ ಸವಾಲಿನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನೆರವೇರಿದೆ.ಈಗಾಗಲೇ ಎರಡು ಬಾರಿ ಹೆರಿಗೆ ಶಸ್ತ್ರಚಿಕಿತ್ಸೆ (ಎಲ್‌ಎಸ್‌ಸಿಎಸ್)ಗೊಳಗಾಗಿದ್ದ ಮಹಿಳಾ ರೋಗಿಯಲ್ಲಿ ಭಾರಿ ಗಾತ್ರದ ಅಂಡಾಶಯದ ಕೋಶ (ಸಿಸ್ಟ್) ಪತ್ತೆಯಾಗಿತ್ತು. ಸುಮಾರು 6.5 x 25.5 x 28.5 ಸೆಂ.ಮೀ ಅಳತೆಯ ಈ ಸಿಸ್ಟ್‌ನ್ನು ಲಾಪರೋಟಮಿ ವಿಧಾನದಲ್ಲಿ ಶಸ್ತ್ರಚಿಕಿತ್ಸೆ ಮೂಲಕ ವೈದ್ಯರು ಯಶಸ್ವಿಯಾಗಿ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.ಸುಮಾರು 8 ಕೆ.ಜಿ. 300 ಗ್ರಾಂ ತೂಕದ ಎಡ ಅಂಡಾಶಯದ ಸಿಸ್ಟ್‌ನ್ನು ಯಾವುದೇ ಹಾನಿಯಾಗದಂತೆ ಸುರಕ್ಷಿತವಾಗಿ ಹೊರತೆಗೆದು, ಅಗತ್ಯವಿರುವ ಹಿನ್ನೆಲೆಯಲ್ಲಿ ಸಂಪೂರ್ಣ ಗರ್ಭಾಶಯ ಮತ್ತು ಬಲ ಅಂಡಾಶಯವನ್ನು ಕೂಡ ತೆಗೆದುಹಾಕಲಾಗಿದೆ.ಈ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ಡಾ. ವಿಜಯಾ ಎಂ. ರೇವಣಕರ್ ಅವರ ಮಾರ್ಗದರ್ಶನದಲ್ಲಿ, ಡಾ. ಪೂರ್ವಿಕಾ ಆಚಾರ್ಯ ಅವರ ಸಹಕಾರದೊಂದಿಗೆ ನೆರವೇರಿಸಲಾಯಿತು. ಅರಿವಳಿಕೆ ತಜ್ಞರಾದ ಡಾ. ಆತ್ಮಿಕ ಹಾಗೂ ಆಪರೇಷನ್ ಥಿಯೇಟರ್ ಸಿಬ್ಬಂದಿ ತಂಡದ ಸಹಕಾರವೂ ಪ್ರಮುಖವಾಗಿತ್ತು.ಶಸ್ತ್ರಚಿಕಿತ್ಸೆಯ ಬಳಿಕ ರೋಗಿಯ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಯಾವುದೇ ತೊಂದರೆಗಳಿಲ್ಲದೆ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.ಈ ಸಂದರ್ಭದಲ್ಲಿ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನ ಕುಮಾರ್ ಶೆಟ್ಟಿ ಕೆ. ಸೇರಿದಂತೆ ಹಲವು ವೈದ್ಯರು ಉಪಸ್ಥಿತರಿದ್ದರು.ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಡೀನ್ ಡಾ. ಬಿ. ಸಂದೀಪ್ ರೈ ಹಾಗೂ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ. ಸುಮಲತಾ ಆರ್ ಶೆಟ್ಟಿ ಅವರು ವೈದ್ಯಕೀಯ ತಂಡವನ್ನು ಅಭಿನಂದಿಸಿದರು.ಈ ಯಶಸ್ವಿ ಶಸ್ತ್ರಚಿಕಿತ್ಸೆ ಆಸ್ಪತ್ರೆಯ ವೈದ್ಯಕೀಯ ನಿಪುಣತೆ ಹಾಗೂ ತಾಂತ್ರಿಕ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ.

ವರದಿ : ಗಣೇಶ್ ರಿಪ್ಪನ್ ಪೇಟೆ

  • malnadsuddi36@gmail.com

    ಮಲ್ನಾಡ್ ಸುದ್ದಿ ಇದು ಕೇವಲ ಸುದ್ದಿ ವಾಹಿನಿಯಲ್ಲ ಮಲ್ನಾಡ್ ಸುದ್ದಿ ಇದು ಮಲೆನಾಡ ಜನರ ಧ್ವನಿ ಜನರೊಂದಿಗೆ ಸೇರಿ ಅನ್ಯಾಯದ ವಿರುದ್ಧ ಹೋರಾಡುವುದು ನಮ್ಮ ಮಲ್ನಾಡ್ ಸುದ್ದಿ ತಂಡ ನೈಜ್ಯ ಅಪರಾಧ. ಪ್ರಸ್ತುತ ರಾಜಕೀಯ. ಕ್ರೀಡೆ. ಸಾಂಸ್ಕೃತಿಕ ಕಾರ್ಯಕ್ರಮ. ಅನ್ಯಾಯದ ವಿರುದ್ಧ ಹೋರಾಟ. ಉಚಿತ ಕಾನೂನು ಸಲಹೆ. ಸಿನಿಮಾ ಸ್ಟೋರಿಗಳು. ಸರ್ಕಾರದ ಅನುದಾನಗಳ ಬಗ್ಗೆ ಸಮಗ್ರ ಮಾಹಿತಿ. ಒಟ್ಟಾರೆಯಾಗಿ ಸಮಾಜವನ್ನು ಸುಧಾರಿಸುವುದು ನಮ್ಮ ಮಲ್ನಾಡ್ ಸುದ್ದಿ ತಂಡದ ಗುರಿ

    Related Posts

    ರಿಪ್ಪನ್ ಪೇಟೆ: ಬೈಕ್–ಕಾರ್ ಡಿಕ್ಕಿ, ಸವಾರನಿಗೆ ಗಂಭೀರ ಗಾಯ

    ರಿಪ್ಪನ್ ಪೇಟೆ ಸಮೀಪದ ತೀರ್ಥಹಳ್ಳಿ ರಸ್ತೆಯಲ್ಲಿ ಇಂದು ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ರಸ್ತೆ ಬದಿಯಿಂದ ಅಡ್ಡಲಾಗಿ ಕಾರನ್ನು ತಿರುಗಿಸುವ ವೇಳೆ ಎದುರು ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಬೈಕ್…

    ಕೊಳವಳ್ಳಿ ಗ್ರಾಮದಲ್ಲಿ ಯುವಕ ಆತ್ಮಹತ್ಯೆಕಬಡ್ಡಿ ಆಟಗಾರ ಸುನೀಲ್ ದುರ್ಮರಣ…!!

    ರಿಪ್ಪನ್ ಪೇಟೆ ಸಮೀಪದ ಕೊಳವಳ್ಳಿ ಗ್ರಾಮದಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ವರದಿಯಾಗಿದೆ.ಮೃತ ಯುವಕನನ್ನು ಕೊಳವಳ್ಳಿ ಗ್ರಾಮದ ಸುನೀಲ್ ಬಿನ್ ವೀರಭದ್ರ (23) ಎಂದು ಗುರುತಿಸಲಾಗಿದೆ. ಬುಧವಾರ ಸಂಜೆ ಕೆಲಸ ಮುಗಿಸಿಕೊಂಡು ಮನೆಗೆ ಬಂದ ಸುನೀಲ್, ನಂತರ…

    Leave a Reply

    Your email address will not be published. Required fields are marked *

    You Missed

    ರಿಪ್ಪನ್ ಪೇಟೆ: ಬೈಕ್–ಕಾರ್ ಡಿಕ್ಕಿ, ಸವಾರನಿಗೆ ಗಂಭೀರ ಗಾಯ

    ಕೊಳವಳ್ಳಿ ಗ್ರಾಮದಲ್ಲಿ ಯುವಕ ಆತ್ಮಹತ್ಯೆಕಬಡ್ಡಿ ಆಟಗಾರ ಸುನೀಲ್ ದುರ್ಮರಣ…!!

    6–9 ಮೊಬೈಲ್ ವೀಕ್ಷಣೆ ಬ್ಯಾನ್ ಡಂಗುರ: ಮಕ್ಕಳಿಗೆ ಅಲ್ಲ, ತಂದೆತಾಯಿಗಳಿಗೆ ಮೊದಲು ನಿಯಮ

    ಒಕ್ಕನೆ ಬಾವಿ ಗ್ರಾಮದಲ್ಲಿ ಅರಣ್ಯ ಇಲಾಖೆಯ ವಿರುದ್ಧ ಅಹೋರಾತ್ರಿ ಧರಣಿ

    ರಿಪ್ಪನ್‌ಪೇಟೆಯಲ್ಲಿ ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ

    ನಕಲಿ ಬಂಗಾರ ನೀಡಿ ವಂಚನೆ- ಮಹಿಳೆ ಬಂಧನ