ಕೊಳವಳ್ಳಿ ಗ್ರಾಮದಲ್ಲಿ ಯುವಕ ಆತ್ಮಹತ್ಯೆಕಬಡ್ಡಿ ಆಟಗಾರ ಸುನೀಲ್ ದುರ್ಮರಣ…!!

ರಿಪ್ಪನ್ ಪೇಟೆ ಸಮೀಪದ ಕೊಳವಳ್ಳಿ ಗ್ರಾಮದಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ವರದಿಯಾಗಿದೆ.ಮೃತ ಯುವಕನನ್ನು ಕೊಳವಳ್ಳಿ ಗ್ರಾಮದ ಸುನೀಲ್ ಬಿನ್ ವೀರಭದ್ರ (23) ಎಂದು ಗುರುತಿಸಲಾಗಿದೆ. ಬುಧವಾರ ಸಂಜೆ ಕೆಲಸ ಮುಗಿಸಿಕೊಂಡು ಮನೆಗೆ ಬಂದ ಸುನೀಲ್, ನಂತರ ಸ್ನೇಹಿತನ ಮನೆಗೆ ಹೋಗುವುದಾಗಿ ಹೇಳಿ ಸುಮಾರು 5 ಗಂಟೆಗೆ ಹೊರಟಿದ್ದನು. ರಾತ್ರಿ 11 ಗಂಟೆಗೆ ಮನೆಗೆ ವಾಪಸ್ಸು ಬಂದಿದ್ದಾನೆ. ಈ ವೇಳೆ ಅವನು ಮದ್ಯಪಾನ ಮಾಡಿದ್ದನೆಂದು ತಿಳಿದುಬಂದಿದೆ.ಮನೆಗೆ ಬಂದ ನಂತರ ತಂದೆ-ತಾಯಿಯವರೊಂದಿಗೆ ಮಾತನಾಡಿ, ಮನೆಯ ಹೊರಭಾಗದ ಜಗುಲಿಯಲ್ಲಿ ಕೆಲಕಾಲ ಕುಳಿತಿದ್ದಾನೆ. ಬಳಿಕ ತಂದೆ ಮಲಗಲು ತೆರಳಿದ ನಂತರ, ಸುನೀಲ್ ಮನೆಯೊಳಗೆ ಹೋಗಿದ್ದಾನೆ. ಇದೇ ವೇಳೆ ಹೊರಗೆ ಮಾತನಾಡುತ್ತಿದ್ದ ಅಣ್ಣ ಸುಮಂತ್ ಹಾಗೂ ತಾಯಿ ಸುಮಾರು 11:30ರ ವೇಳೆಗೆ ಒಳಗೆ ಹೋಗಿ ನೋಡಿದಾಗ, ಮನೆಯ ಹಾಲ್‌ನಲ್ಲಿದ್ದ ಕಬ್ಬಿಣದ ರಾಡಿಗೆ ನೈಲಾನ್ ಬೆಡ್‌ಶೀಟ್ ಬಳಸಿ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ.ತಕ್ಷಣವೇ ಕೆಳಗಿಳಿಸಿ ಪಕ್ಕದ ಮನೆಯವರ ಸಹಾಯದಿಂದ ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ವೈದ್ಯರು ಪರಿಶೀಲಿಸಿದ ಬಳಿಕ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.ಕುಟುಂಬದವರ ಪ್ರಕಾರ, ಸುನೀಲ್ ಹೆಚ್ಚು ಮದ್ಯಪಾನ ಮಾಡುತ್ತಿದ್ದುದರಿಂದ ಮಾನಸಿಕವಾಗಿ ಅಸ್ವಸ್ಥನಾಗಿದ್ದನು ಎಂದು ತಿಳಿದುಬಂದಿದೆ. ಇನ್ನು, ಆತ ಒಬ್ಬ ಉತ್ತಮ ಕಬಡ್ಡಿ ಕ್ರೀಡಾಪಟುವಾಗಿದ್ದನೆಂಬ ಮಾಹಿತಿ ಲಭ್ಯವಾಗಿದೆ.ಈತನ ಸಾವಿನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಸಂಬಂಧ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ವರದಿ : ಕೆರೆಹಳ್ಳಿ ಅಂಜನ್ Kolavalli suicide caseRipponpet youth suicideSunil Veerabhadra deathKarnataka village suicide newsKabaddi player suicideYouth hanging case KarnatakaAlcohol addiction suicide caseShivamogga district newsRipponpet police caseRural Karnataka tragedy

  • malnadsuddi36@gmail.com

    ಮಲ್ನಾಡ್ ಸುದ್ದಿ ಇದು ಕೇವಲ ಸುದ್ದಿ ವಾಹಿನಿಯಲ್ಲ ಮಲ್ನಾಡ್ ಸುದ್ದಿ ಇದು ಮಲೆನಾಡ ಜನರ ಧ್ವನಿ ಜನರೊಂದಿಗೆ ಸೇರಿ ಅನ್ಯಾಯದ ವಿರುದ್ಧ ಹೋರಾಡುವುದು ನಮ್ಮ ಮಲ್ನಾಡ್ ಸುದ್ದಿ ತಂಡ ನೈಜ್ಯ ಅಪರಾಧ. ಪ್ರಸ್ತುತ ರಾಜಕೀಯ. ಕ್ರೀಡೆ. ಸಾಂಸ್ಕೃತಿಕ ಕಾರ್ಯಕ್ರಮ. ಅನ್ಯಾಯದ ವಿರುದ್ಧ ಹೋರಾಟ. ಉಚಿತ ಕಾನೂನು ಸಲಹೆ. ಸಿನಿಮಾ ಸ್ಟೋರಿಗಳು. ಸರ್ಕಾರದ ಅನುದಾನಗಳ ಬಗ್ಗೆ ಸಮಗ್ರ ಮಾಹಿತಿ. ಒಟ್ಟಾರೆಯಾಗಿ ಸಮಾಜವನ್ನು ಸುಧಾರಿಸುವುದು ನಮ್ಮ ಮಲ್ನಾಡ್ ಸುದ್ದಿ ತಂಡದ ಗುರಿ

    Related Posts

    ರಿಪ್ಪನ್ ಪೇಟೆ: ಬೈಕ್–ಕಾರ್ ಡಿಕ್ಕಿ, ಸವಾರನಿಗೆ ಗಂಭೀರ ಗಾಯ

    ರಿಪ್ಪನ್ ಪೇಟೆ ಸಮೀಪದ ತೀರ್ಥಹಳ್ಳಿ ರಸ್ತೆಯಲ್ಲಿ ಇಂದು ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ರಸ್ತೆ ಬದಿಯಿಂದ ಅಡ್ಡಲಾಗಿ ಕಾರನ್ನು ತಿರುಗಿಸುವ ವೇಳೆ ಎದುರು ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಬೈಕ್…

    6–9 ಮೊಬೈಲ್ ವೀಕ್ಷಣೆ ಬ್ಯಾನ್ ಡಂಗುರ: ಮಕ್ಕಳಿಗೆ ಅಲ್ಲ, ತಂದೆತಾಯಿಗಳಿಗೆ ಮೊದಲು ನಿಯಮ

    ಮಕ್ಕಳ ಮೊಬೈಲ್ ಬಳಕೆ ಕುರಿತು ಮಹತ್ವದ ನಿರ್ಧಾರವನ್ನು ಪ್ರಕಟಿಸಲಾಗಿದೆ. 6ರಿಂದ 9 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ನೋಡುವುದನ್ನು ಸಂಪೂರ್ಣವಾಗಿ ನಿರ್ಬಂಧಿಸುವಂತೆ ಸಲಹೆ ನೀಡಲಾಗಿದೆ. ಆದರೆ ಇದರ ಜವಾಬ್ದಾರಿ ಮೊದಲಿಗೆ ತಂದೆತಾಯಿಗಳ ಮೇಲಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.ಮಕ್ಕಳಿಗೆ ಅತಿಯಾಗಿ ಮೊಬೈಲ್ ಬಳಕೆ ನೀಡುವುದರಿಂದ…

    Leave a Reply

    Your email address will not be published. Required fields are marked *

    You Missed

    ರಿಪ್ಪನ್ ಪೇಟೆ: ಬೈಕ್–ಕಾರ್ ಡಿಕ್ಕಿ, ಸವಾರನಿಗೆ ಗಂಭೀರ ಗಾಯ

    ಕೊಳವಳ್ಳಿ ಗ್ರಾಮದಲ್ಲಿ ಯುವಕ ಆತ್ಮಹತ್ಯೆಕಬಡ್ಡಿ ಆಟಗಾರ ಸುನೀಲ್ ದುರ್ಮರಣ…!!

    6–9 ಮೊಬೈಲ್ ವೀಕ್ಷಣೆ ಬ್ಯಾನ್ ಡಂಗುರ: ಮಕ್ಕಳಿಗೆ ಅಲ್ಲ, ತಂದೆತಾಯಿಗಳಿಗೆ ಮೊದಲು ನಿಯಮ

    ಒಕ್ಕನೆ ಬಾವಿ ಗ್ರಾಮದಲ್ಲಿ ಅರಣ್ಯ ಇಲಾಖೆಯ ವಿರುದ್ಧ ಅಹೋರಾತ್ರಿ ಧರಣಿ

    ರಿಪ್ಪನ್‌ಪೇಟೆಯಲ್ಲಿ ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ

    ನಕಲಿ ಬಂಗಾರ ನೀಡಿ ವಂಚನೆ- ಮಹಿಳೆ ಬಂಧನ