ಸಾಧನ ಸಮಾವೇಶ ಟೀಕಿಸಿದ ಮಾಜಿ ಶಾಸಕ

ಹರತಾಳ ಹಾಲಪ್ಪ ಅವರು ಸುದ್ದಿಗೋಷ್ಠಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸರ್ಕಾರ ಆಯೋಜಿಸಿರುವ ಸಾಧನ ಸಮಾವೇಶವನ್ನು ಟೀಕಿಸಿದ ಅವರು, ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಯಾವುದೇ ಮಹತ್ವದ ಅಭಿವೃದ್ಧಿ ಕೆಲಸಗಳು ನಡೆದಿಲ್ಲ ಎಂದು ಆರೋಪಿಸಿದರು.
ಸರ್ಕಾರವು ಜನರ ನಿರೀಕ್ಷೆಗಳಿಗೆ ತಕ್ಕಂತೆ ಕಾರ್ಯನಿರ್ವಹಿಸಲು ವಿಫಲವಾಗಿದೆ ಎಂದು ಹೇಳಿದ ಹಾಲಪ್ಪ, ಮುಖ್ಯಮಂತ್ರಿ ಸ್ಥಾನಕ್ಕಾಗಿ ನಡೆಯುತ್ತಿರುವ ಒಳಗದ್ದಲವೇ ಸರ್ಕಾರದ ಪ್ರಮುಖ ಚಟುವಟಿಕೆಯಾಗಿಬಿಟ್ಟಿದೆ ಎಂದು ಟೀಕಿಸಿದರು. ಆಡಳಿತದ ಗಮನ ಅಭಿವೃದ್ಧಿ ಕಾರ್ಯಗಳ ಕಡೆಗಿಂತ ಕುರ್ಚಿ ರಾಜಕೀಯದ ಮೇಲೆಯೇ ಹೆಚ್ಚು ಕೇಂದ್ರೀಕೃತವಾಗಿದೆ ಎಂದು ಅವರು ಆರೋಪಿಸಿದರು.
ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೆ ತರುವಲ್ಲಿಯೂ ಸರ್ಕಾರ ಹೈರಾಣಾಗಿದೆ ಎಂದು ಹೇಳಿದ ಅವರು, ಯೋಜನೆಗಳ ಅನುಷ್ಠಾನದಲ್ಲಿ ಸ್ಪಷ್ಟತೆ ಮತ್ತು ಪರಿಣಾಮಕಾರಿತ್ವ ಕಾಣಿಸುತ್ತಿಲ್ಲ ಎಂದರು. ಜನಪರ ಹಾಗೂ ಅಭಿವೃದ್ಧಿಪರ ಕಾರ್ಯಕ್ರಮಗಳನ್ನು ಜಾರಿಗೆ ತರಲು ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಕುಂಠಿತಗೊಂಡಿದ್ದು, ರೈತರು, ಯುವಕರು ಹಾಗೂ ಸಾಮಾನ್ಯ ಜನತೆ ಸರ್ಕಾರದ ಕಾರ್ಯವೈಖರಿಯಿಂದ ನಿರಾಶರಾಗಿದ್ದಾರೆ ಎಂದು ಹರತಾಳ ಹಾಲಪ್ಪ ಹೇಳಿದರು. ಸರ್ಕಾರ ಸಾಧನೆಗಳ ಹೆಸರಿನಲ್ಲಿ ಸಮಾವೇಶ ನಡೆಸುವುದಕ್ಕಿಂತ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಅವರು ಆಗ್ರಹಿಸಿದರು.



Leave a Reply